ಮಾಣಿ: ರಿಕ್ಷಾದಲ್ಲಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುತ್ತಿದ್ದಾಗ ಚಾಲಕ ಹೃದಯಾಘಾತದಿಂದ ಸಾವು
ಹಠಾತ್ ಹೃದಯಾಘಾತ ಆಟೋ ರಿಕ್ಷಾ ಚಾಲಕ ಸಾವು

ಬಂಟ್ವಾಳ: ಆಟೋ ರಿಕ್ಷಾ ಚಾಲಕರೊಬ್ಬರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪದಲ್ಲಿ ನಡೆದಿದೆ. 

ಮೃತರನ್ನು ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಆಟೋ ಚಾಲಕ ಜಯಕರ ಪೂಜಾರಿ (45) ಎನ್ನಲಾಗಿದೆ. ಜಯಕರ ಪೂಜಾರಿ ಅವರು ಎಂದಿನಂತೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಮಕ್ಕಳನ್ನು ಆಟೋರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್‌ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದಾರೆ. ಈ ವೇಳೆ ಆಟೋರಿಕ್ಷಾ ನಿಲ್ಲಿಸಿದ್ದು, ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!