ಮಹತ್ವದ ಸಲಹೆ ಕೊಟ್ಟ ಅಲೋಕ್ ಕುಮಾರ್
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಶಂಕಿತ ಉಗ್ರ ಶಾರೀಕ್, ಮೈಸೂರಲ್ಲಿ ಹಿಂದು ಯುವಕನೆಂದು ಹೇಳಿಕೊಂಡು ನಕಲಿ ಆಧಾರ್ ಇಟ್ಟುಕೊಂಡು ಓಡಾಡುತ್ತಿದ್ದ. ಅಷ್ಟೇ ಅಲ್ಲ, ಟೆಕ್ಕಿಯೊಬ್ಬರ ಹೆಸರಲ್ಲಿ ಸಿಮ್ ಕೂಡ ಪಡೆದಿದ್ದ.
ಫೋನ್ ತರಬೇತಿಗೂ ನಕಲಿ ದಾಖಲೆ ಕೊಟ್ಟಿದ್ದ… ಇಂತಹ ಆಘಾತಕಾರಿ ಸಂಗತಿಗಳು ಒಂದೊಂದೇ ಬಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಸಾರ್ವಜನಿಕರಿಗೆ ಮಹತ್ವದ ಸಲಹೆ ಕೊಟ್ಟು ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.
ಸಾರ್ವಜನಿಕರಿಗೆ ಅಲೋಕ್ ಕುಮಾರ್ ಅವರು ನೀಡಿರುವ ಸಲಹೆ ಇಲ್ಲಿದೆ
- ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಕಳೆದುಕೊಂಡರೆ ಜಾಗರೂಕರಾಗಿರಿ
- ಯುಐಡಿಎಐ ಸೈಟ್ನ ದುರುಪಯೋಗ ತಡೆಯಲು ಲಭ್ಯವಿರುವ ಲಾಕ್ ಮತ್ತು ಅನ್ಲಾಕ್ ಸೌಲಭ್ಯವನ್ನು ಬಳಸಿ
- ಅಪರಿಚಿತರಿಗೆ ಮನೆ ಬಾಡಿಗೆಗೆ ಕೊಡುವ ಮುನ್ನ ಅವರ ಪೂರ್ವಾಪರಗಳನ್ನು ಪರಿಶೀಲಿಸಿ. ಗುರತಿನ ಚೀಟಿಗಳ ಒಂದು ಪ್ರತಿ ಪಡೆದಿಟ್ಟುಕೊಳ್ಳಿ.
- ನಿಮ್ಮ ಸುತ್ತಮುತ್ತ ಏನಾಗುತ್ತಿದೆ ಎಂಬುದರ ಬಗ್ಗೆ ನಿಗಾ ಇಡಿ.
Comments
0 comment