ಉಡುಪಿ: ಚಿನ್ನಾಭರಣ ದರೋಡೆ ಮಾಡಿದ ಹೋಂ ನರ್ಸ್
ವೃದ್ದೆಯ ಚಿನ್ನ ಕದ್ದ ಹೋಂ ನರ್ಸ್ ಪೊಲೀಸ್ ಬಲೆಗೆ

ಉಡುಪಿ: ವೃದ್ದೆಯೊಬ್ಬಳನ್ನು ನೋಡಿಕೊಳ್ಳಲು ಮನೆಯಲ್ಲಿ ಕೆಲಸಕ್ಕಿದ್ದ ಹೋಂ ನರ್ಸ್ ವೃದ್ದೆಯ ಲಕ್ಷಾಂತರ ರೂಪಾಯಿ ಚಿನ್ನಾಭರಣವನ್ನು ದರೋಡೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ರೇಖಾ ಹೆಬ್ಬಳ್ಳಿ ಎಂದು ಗುರುತಿಸಲಾಗಿದೆ.

ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಚೆನ್ನಿಬೆಟ್ಟು ಮದಗ ನಿವಾಸಿ ವಯೋ ವೃದ್ದೇ ಸರಸ್ವತಿ (98) ಎಂಬವರ ಆರೈಕೆಗೆ ಉಡುಪಿ ಉಷಾ ಮ್ಯಾರೇಜ್ ಬ್ಯುರೋ ಜಾಬ್ ಲಿಂಕ್ಸ್ ಏಜೆನ್ಸಿ ಮೂಲಕ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಾಳ್ಳಿಯನ್ನು  ನೇಮಿಸಿಕೊಳ್ಳಲಾಗಿತ್ತು. ಆದರೆ, ಕೆಲಸಕ್ಕೆ ನೇಮಿಸಿದಾಕೆ ಮನೆಯಲ್ಲಿ ವೃದ್ದೆಯೊಬ್ಬರೇ ಇದ್ದಂತಹ ಸಂದರ್ಭದಲ್ಲಿ ಸರಸ್ವತಿರವರ ಕುತ್ತಿಗೆಯಲ್ಲಿದ್ದ ಸುಮಾರು 1.45 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಹಿರಿಯಡ್ಕ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!