ಮಂಗಳೂರು: ಭಯೋತ್ಪಾದನೆ ವಿರುದ್ಧ ಜನಜಾಗೃತಿ ಅಭಿಯಾನ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾವೂರು ಪ್ರಖಂಡ

ಕಾವೂರು: ಕರಾವಳಿಯ ಭದ್ರತೆಗೆ ಸವಾಲು ಒಡ್ಡುವ ಭಯೋತ್ಪಾದನೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾವೂರು ಪ್ರಖಂಡ ಇಂದು ಕಾವೂರು ಜಂಕ್ಷನ್‌ನಲ್ಲಿ ಜನಜಾಗೃತಿ ಅಭಿಯಾನ ನಡೆಸಲಾಯಿತು.

ಬೆಳಗ್ಗೆ ಒಂಬತ್ತು ಘಂಟೆಯಿಂದ ಹತ್ತು ಘಂಟೆಯವರೆಗೆ ಒಂದು ಘಂಟೆಯ ಕಾಲ ನೂರಾರು ನಾಗರಿಕರು ಕಾವೂರು ಜಂಕ್ಷನ್‌ನಲ್ಲಿ ಏರ್ ಪೋರ್ಟ್ ರಸ್ತೆಯ ಒಂದು ಬದಿಯುದ್ದಕ್ಕೂ ನೂರಾರು ಸಂಖ್ಯೆಯಲ್ಲಿ ಭಯೋತ್ಪಾದನೆಯ ವಿರುದ್ಧದ ಬರಹಗಳ ಪೋಸ್ಟರ್ ಗಳನ್ನು ಪ್ರದರ್ಶಿಸುವ ಮೂಲಕ ಭಯೋತ್ಪಾದನೆಯ ವಿರುದ್ಧ ಹಿಂದೂ ಸಮಾಜ ಜಾಗೃತಗೊಂಡಿದೆ ಎಂಬ ಸಂದೇಶವನ್ನು ಸಾರಲಾಯಿತು.

ಅಭಿಯಾನದಲ್ಲಿ ಬಜರಂಗದಳದ ನೂರಾರು ಕಾರ್ಯಕರ್ತರು ಭಾಗವಹಿಸಿದರು. ಅಭಿಯಾನಕ್ಕೆ ಸಂಘಪರಿವಾರದ ವಿವಿಧ ಅಂಗಗಳ ಮುಖಂಡರು, ಕಾರ್ಯಕರ್ತರು, ಜನಪ್ರತಿನಿಧಿಗಳು ಹಾಗೂ ಹಿಂದೂ ಯುವ ಸೇನೆಯ ಕಾರ್ಯಕರ್ತರು ಸಾಥ್ ನೀಡಿದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!