ಕಾರ್ಕಳ: ಬಸ್ಸಿನ ಚಕ್ರದಡಿ ಬಿದ್ದು ವ್ಯಕ್ತಿ ಮೃತ್ಯು
ಬಸ್ಸಿಗೆ ಹತ್ತುವ ವೇಳೆ ನಿಯಂತ್ರಣ ತಪ್ಪಿ ಚಕ್ರದಡಿ ಸಿಲುಕಿದ ವ್ಯಕ್ತಿ

ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ಡಿ.೦೪ ರ ಭಾನುವಾರ ಸಂಜೆ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿ ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ. ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸ್’ಗೆ ಹೋಗಲು ಬಸ್ಸು ಹತ್ತುವ ವೇಳೆ ಈ ಘಟನೆ ಸಂಭವಿಸಿದೆ. ತಕ್ಷಣವೇ ಅಂಬ್ಯುಲೆನ್ಸ್(108) ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!