ಕಾಪು: ಅಕ್ರಮ ಕಸಾಯಿ ಖಾನೆಗೆ ದಾಳಿ - ಇಬ್ಬರು ಪರಾರಿ
ಅಕ್ರಮ ಕಸಾಯಿ ಖಾನೆಗೆ ದಾಳಿ - ಇಬ್ಬರು ಪರಾರಿ

ಕಾಪು: ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಇಂದು ಬೆಳಿಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.

ಅಕ್ರಮದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ಇಂದು ಬೆಳಿಗ್ಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಫ್ಯಾಕ್ಟರಿಯ ಹಿಂಭಾಗದಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಂಡುಬಂದಿದೆ.

ಕೂಡಲೇ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದು, ಈ ವೇಳೆ ಕಾಪುವಿನ ಭಾರತ್ ನಗರದ ನಿವಾಸಿ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಇದ್ದ ಸುಮಾರು 200 ಕೆಜಿಯಷ್ಟು ದನದ ಮಾಂಸ, ಕೃತ್ಯಕ್ಕೆ ಬಳಸಿದ ಮಾರಕಾಯುಧ ಹಾಗೂ ಇತರ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!