ಶಾಲೆಗೆ ಹೊರಟ ಬಾಲಕನಿಗೆ ಹೃದಯಾಘಾತ: ಮೃತ್ಯು
ಸುರತ್ಕಲ್: ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು.
ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
Comments
0 comment