ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ನೂತನ ಧ್ವಜಸ್ತಂಭ ಸಮರ್ಪಣಾ ಮೆರವಣಿಗೆ
ವಿಜೃಂಭಣೆಯಿಂದ ನಡೆದ ನೂತನ ಧ್ವಜಸ್ತಂಭ ಸಮರ್ಪಣಾ ಮೆರವಣಿಗೆ

ಹಳೆಯಂಗಡಿ: ಇಲ್ಲಿಗೆ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ತೋಕೂರು ಕ್ಷೇತ್ರಕ್ಕೆ ನೂತನ ಧ್ವಜಸ್ತಂಭ ಸಮರ್ಪಣಾ ಮೆರವಣಿಗೆ ಶನಿವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕ ನರಸಿಂಹ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ, ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತಸರ ಮನೋಹರ ಶೆಟ್ಟಿ ಧ್ವಜಸ್ತಂಭ ಸಮರ್ಪಣಾ ಮೆರವಣಿಗೆಗೆ ಚಾಲನೆ ನೀಡಿದರು.

ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಡಾ. ರಾಜಶೇಖರ ಕೋಟ್ಯಾನ್, ತೋಕೂರು ದೇವಸ್ಥಾನದ ಅರ್ಚಕ ಮಧುಸೂದನ ಆಚಾರ್ಯ, ಸಮಿತಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಧಾರ್ಮಿಕ ಪರಿಷತ್‌ ಸದಸ್ಯರಾದ ಗಿರಿ ಪ್ರಕಾಶ್ ತಂತ್ರಿ ಪೊಳಲಿ, ಭುವನಾಭಿರಾಮ ಉಡುಪ, ಹರಿದಾಸ್ ಭಟ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ನೂತನ ಧ್ವಜಸ್ತಂಭದ ಭವ್ಯ ಮೆರವಣಿಗೆ ನಡೆಯಿತು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!