ರಾಜ್ಯದ ಪೊಲೀಸ್ ಇಲಾಖೆಯಲ್ಲಿ 15 ಪೊಲೀಸ್ ಅಧಿಕಾರಿಗಳ ಧಿಡೀರ್ ವರ್ಗಾವಣೆ...
ದಕ್ಷಿಣ ಕನ್ನಡ SP ಯಾಗಿ ಖಡಕ್ ಆಫೀಸರ್ ಸಿ ಬಿ ರಿಷ್ಯಂತ್.

ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಹೀಗಾಗಿ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಖಡಕ್ ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ನೇಮಕ ಮಾಡಲಾಗಿದೆ (Dakshina Kannada SP). ಅಂದಹಾಗೆ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ್‌ ಅಮಟೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ್ದು, ಪ್ರಭಾರ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಐಪಿಎಸ್‌ ಅಧಿಕಾರಿ ರಿಷ್ಯಂತ್‌ ಸಿ.ಬಿ ಅವರನ್ನು ನಿಯೋಜಿಸಲಾಗಿತ್ತು.

2013ನೇ ಸಾಲಿನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿರುವ ರಿಷ್ಯಂತ್ ಮಂಗಳೂರಿನಲ್ಲಿ ಎಎಸ್ಪಿಯಾಗಿ, ಬಾಗಲಕೋಟೆ, ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೆ ಈ ಹಿಂದೆ ದಾವಣಗೆರೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ನಂತರ ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!