ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಮೋದಿ ಭೇಟಿಯಾದ ಸಿಎಂ - ಮೈಸೂರು ಅಂಬಾರಿ ಉಡುಗೊರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಸೌಹಾರ್ದಯುತ ಭೇಟಿ ಮಾಡಿ ಮಾತುಕತೆ ನಡೆಸಿದರು.

ಸೌಹಾರ್ದಯುತ ಭೇಟಿ ವೇಳೆ ಪ್ರಧಾನಿ ಮೋದಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿದ ಮೈಸೂರು ದಸರಾ ಅಂಬಾರಿಯನ್ನು ನೀಡಿದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ರಾಜ್ಯಕ್ಕೆ ಬರಬೇಕಾದ ಅನುದಾನಗಳ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ.

ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!