ವಿಮಾನದಲ್ಲಿದ್ದ ನೀರು ಕುಡಿದು ಅಸ್ವಸ್ಥ; ಕ್ರಿಕೆಟಿಗ ಮಯಾಂಕ್​ ಅಗರ್ವಾಲ್ ಆರೋಗ್ಯದಲ್ಲಿ​ ಚೇತರಿಕೆ
ವಿಮಾನದಲ್ಲಿದ್ದ ನೀರು ಕುಡಿದು ಅಸ್ವಸ್ಥ; ಕ್ರಿಕೆಟಿಗ ಮಯಾಂಕ್​ ಅಗರ್ವಾಲ್ ಆರೋಗ್ಯದಲ್ಲಿ​ ಚೇತರಿಕೆ

ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಟೀಮ್​ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್​ ಅಗರ್ವಾಲ್ ಆರೋಗ್ಯದಲ್ಲಿ​ ಚೇತರಿಕೆ ಕಂಡು ಬಂದಿದೆ. ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.

ನಿನ್ನೆ ತ್ರಿಪುರಾದಿಂದ ಸೂರತ್​ಗೆ ತೆರಳುವ ವೇಳೆ ವಿಮಾನದಲ್ಲಿದ್ದ ನೀರು ಕುಡಿದ ಬಳಿಕ ಮಯಾಂಕ್​​ ಅಗರ್ವಾಲ್​ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಾಯಿ ಹಾಗೂ ಗಂಟಲಲ್ಲಿ ಸುಟ್ಟ ಅನುಭವವಾದ ಬೆನ್ನಲ್ಲೇ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಗರ್ತಲಾದ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದ ಮಯಾಂಕ್​ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಮಯಾಂಕ್​ ಪೋಸ್ಟ್​ ಮಾಡಿದ್ದು, ನಾನು ಆರೋಗ್ಯವಾಗಿದ್ದಿನಿ ಎಂದು ಬರೆದುಕೊಂಡಿದ್ದಾರೆ.

ಇನ್ನು, ಇಂದು ಬೆಳಗ್ಗೆ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಮ್ಯಾನೇಜರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆಗಾಗಿ NCCPS ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!