ಮುಳುಗಿದ ದೋಣಿ: 4 ಸಾವು - ವಿದ್ಯಾರ್ಥಿಗಳು ಸೇರಿ ಹಲವರು ನಾಪತ್ತೆ
ನದಿಯಲ್ಲಿ ದೋಣಿ ಮುಳುಗಿ 4 ಸಾವು - ಹಲವರು ನಾಪತ್ತೆ

ದೋಣಿ ಮುಳುಗಿ ನಾಲ್ವರು ಸಾವನ್ನಪ್ಪಿ, ವಿದ್ಯಾರ್ಥಿಗಳು ಸೇರಿ ಹಲವರು ನಾಪತ್ತೆಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ಸೋಮವಾರ ನಡೆದಿದೆ.

ಸ್ಥಳಕ್ಕಾಗಮಿಸಿದ ಎಸ್‌ಡಿಆರ್ ಎಫ್ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಭಾಗದಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ನದಿಯ ಹರಿವು ಹೆಚ್ಚಾಗಿದೆ. ಹೀಗಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

ಇನ್ನು ಈ ದೋಣಿಯಲ್ಲಿ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!